ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆಯಿಂದ ವಿಶ್ವ ಆರೋಗ್ಯ ದಿನಾಚರಣೆ – ಉಚಿತ ಆರೋಗ್ಯ ತಪಾಸಣೆ

JANANUDI.COM NETWORK

ಕುಂದಾಪುರ, ಏ.7:   ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಶಾಖೆಯು  ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನಾಚರಣೆ ಆಚರಿಸಿತು. ಕಾರ್ಯಕ್ರಮ ವನ್ನು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಅಧಿಕಾರಿ ಶಸ್ತ್ರ ಚಿಕಿತ್ಸಕರಾದ ಡಾ. ರಾಬರ್ಟ್ ರೆಬೆಲ್ಲೊ ಇವರು ಉದ್ಘಾಟಿಸಿ ಸಂದೇಶ ನೀಡಿದರು.  ರೆಡ್ ಕ್ರಾಸ್ ಸಭಾಪತಿ ಶ್ರೀ ಎಸ್. ಜಯಕರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ರೆಡ್ ಕ್ರಾಸ್ ಸಂಸ್ಥೆಯಿಂದ  ಸರಕಾರಿ ಆಸ್ಪತ್ರೆಗೆ ನೂರು ಮಾಸ್ಕನ್ನು ಉಚಿತವಾಗಿ ನೀಡಲಾಯಿತು.   

ಈ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಲಾಯಿತು. 110 ಜನರು ಈ ಉಚಿತ ಆರೋಗ್ಯ ತಪಾಸಣೆಯ ಪ್ರಯೋಜನ ಪಡೆದರು.      

ಖಜಾಂಚಿ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾದ ಗಣೇಶ್ ಆಚಾರ್ಯ ಎ. ಮುತ್ತಯ್ಯ ಶೆಟ್ಟಿ, ಫಾರ್ಮೆಸಿಸ್ಟ್ ಬ.ಎಮ್ ಚಂದ್ರಶೇಖರ ಇವರುಗಳು ಉಪಸ್ತಿಥರಿದ್ದರು  . ಕಾರ್ಯದರ್ಶಿ ವೈ. ಸೀತಾರಾಮ ಶೆಟ್ಟಿ ವಂದಿಸಿದರು.