ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿ – ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಎಸ್.ಸುಗುಣ ಹಾಗೂ ಉಪಾಧ್ಯಕ್ಷರಾಗಿ ನಾಗಮಣಿ ಆಯ್ಕೆ

ಶ್ರೀನಿವಾಸಪುರ: ತಾಲ್ಲೂಕಿನ ಯರ್ರಂವಾರಿಪಲ್ಲಿ ಗ್ರಾಮ ಪಂಚಾಯಿತಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂ.ಎಸ್.ಸುಗುಣ ಹಾಗೂ ಉಪಾಧ್ಯಕ್ಷರಾಗಿ ನಾಗಮಣಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಎಂ.ಎಸ್.ಸುಗುಣ, ವೈ.ಆರ್.ಶ್ರೀನಿವಾಸರೆಡ್ಡಿ, ಧರ್ಮ ನಾಮಪತ್ರ ಸಲ್ಲಿಸಿದ್ದರು. ಆದರೆ ವೈ.ಆರ್.ಶ್ರೀನಿವಾಸರೆಡ್ಡಿ ಮತ್ತು ಧರ್ಮ ತಮ್ಮ ನಾಮಪತ್ರ ವಾಪಸ್ ಪಡೆದ ಪರಿಣಾಮವಾಗಿ ಎಂ.ಎಸ್.ಸುಗುಣ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು.
ಒಟ್ಟು 16 ಮತಗಳ ಪೈಕಿ 9 ಮತ ಪಡೆದ ನಾಗಮಣಿ ಉಪಾಧ್ಯಕ್ಷರಾಗಿ ಗೆಲುವು ಸಾಧಿಸಿದರು. ಪ್ರತಿಸ್ಪರ್ದಿ ರವಣಮ್ಮ 7 ಮತ ಪಡೆದರು.
ಚುನಾವಣಾಧಿಕಾರಿಯಾಗಿ ಕೃಷ್ಣಪ್ಪ, ಪಿಡಿಒ ಸಂಪತ್ ಕುಮಾರ್ ಚುನಾವಣಾ ಕಾರ್ಯ ನಿರ್ವಹಿಸಿದರು. ಮುಖಂಡರಾದ ನರೇಶ್, ಗಂಗಾಧರ್, ಶ್ರೀನಿವಾಸ್, ಮಂಜುನಾಥ್, ರಮೇಶ್ ಇದ್ದರು.