ಶಿರಸಿ ಭಗವದ್ಗೀತಾ ಅಭಿಯಾನ:ಯುಕ್ತ ಹೊಳ್ಳ ಹಿ. ಪ್ರಾ. ಶಾ. ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ

ವರದಿ : ಮಝರ್, ಕುಂದಾಪುರ

ಶಿರಸಿ ಸ್ವರ್ಣವಲ್ಲಿ ಮಹಾಸಂಸ್ಥಾನ ಭಗವದ್ಗೀತಾ ಅಭಿಯಾನ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ರಾಜ್ಯಮಟ್ಟದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಯುಕ್ತ ಹೊಳ್ಳ ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.ಇತ್ತೀಚೆಗೆ ಸ್ವರ್ಣವಲ್ಲಿ ಮಠದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶ್ರೀ ಶ್ರೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವರು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.