ಇಂದು ಬೀಜಾಡಿ ಮಿತ್ರ ಸಂಗಮದ 22ನೇ ವಾರ್ಷಿಕೋತ್ಸವ

ಇಂದು ಬೀಜಾಡಿ ಮಿತ್ರ ಸಂಗಮದ 22ನೇ ವಾರ್ಷಿಕೋತ್ಸವ


ಕುಂದಾಪುರ: ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆಯಾದ ಬೀಜಾಡಿ-ಗೋಪಾಡಿ ಮಿತ್ರ ಸಂಗಮದ 22ನೇ ವಾರ್ಷಿಕೋತ್ಸವ, ನಮ್ಮೂರ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸ್ಥಳಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ಅಶಕ್ತರಿಗೆ ಸಹಾಯಧನ, ಬಡ ಕುಟುಂಬಕ್ಕೆ ಹೊಲಿಗೆ ಯಂತ್ರ, ವಿಕಲಚೇತನರಿಗೆ ಊರುಗೋಲು ವಿತರಣೆ ಸಮಾರಂಭ ಫೆ.16ರ ಶನಿವಾರ ರಾತ್ರಿ 7.30ಕ್ಕೆ ಬೀಜಾಡಿ ಮಿತ್ರ ಸೌಧದ ವಠಾರದಲ್ಲಿ ಜರುಗಲಿದೆ.
ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಬಾಲಕೃಷ್ಣ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕುಂದಾಪುರದ ವಕೀಲ ರಮೇಶ್ ಹತ್ವಾರ್ ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಸ್ಥೆ ಕೊಡಮಾಡುವ ನಮ್ಮೂರ ಪ್ರಶಸ್ತಿಯನ್ನು ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪಡೆದ ಉದ್ಯಮಿ ಆನಂದ ಸಿ.ಕುಂದರ್ ಅವರಿಗೆ ಪ್ರದಾನ ಮಾಡಲಾಗುವುದು. ಜತೆಗೆ ತಾಲೂಕು ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಪುರಸ್ಕøತ ಪ್ರಗತಿಪರ ಕೃಷಿಕ ರಾಮಕೃಷ್ಣ ಬಾಯರಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಮಕ್ಕಳಿಂದ ವಿವಿಧ ವಿನೋದಾವಳಿಗಳು, ಉಡುಪಿ ಅಭಿನಯ ಕಲಾವಿದರಿಂದ ಬಂದೇ ಬರ್ತಾನೆ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಬೀಜಾಡಿ ಮಿತ್ರ ಸಂಗಮದ ಅಧ್ಯಕ್ಷ ನಾಗರಾಜ ಬಿ.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.