ಕುಂದಾಪುರ ಕಾಂಗ್ರೆಸ್: ಎಪ್ರಿಲ್ 02 ಕಾರ್ಯಕರ್ತರ ಸಭೆ.

ವರದಿ: ಚಂದ್ರಶೇಖರ್ ಶೆಟ್ಟಿ

ಕುಂದಾಪುರ ಕಾಂಗ್ರೆಸ್: ಎಪ್ರಿಲ್ 02 ಕಾರ್ಯಕರ್ತರ ಸಭೆ.

ಎಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಅಂಗವಾಗಿ ಎಪ್ರಿಲ್ 02 ಮಂಗಳವಾರ ಮಧ್ಯಾಹ್ನ ಗಂಟೆ 2.30ಕ್ಕೆ ಕುಂದಾಪುರದ ಆರ್‌.ಎನ್‌ ಶೆಟ್ಟಿ ಹಾಲ್‌ನಲ್ಲಿ ಕಾರ್ಯಕರ್ತರ, ಜನಪ್ರತಿನಿಧಿಗಳ ಹಾಗೂ ಪದಾದಿಕಾರಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮದ್ವರಾಜ್, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಲ್ಯಾಡಿ ಶಿವರಾಮ ಶೆಟ್ಟಿ, ಬಿ ಹಿರಿಯಣ್ಣ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.