ಕುಂದಾಪುರ ಬ್ಲಾಕ್ ಕಾಂಗ್ರೆಸ್: ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾದಿಕಾರಿಗಳ ಸಭೆ.

 

ವರದಿ: ಚಂದ್ರಶೇಖರ ಶೆಟ್ಟಿ

ಕುಂದಾಪುರ ಬ್ಲಾಕ್ ಕಾಂಗ್ರೆಸ್: ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾದಿಕಾರಿಗಳ ಸಭೆ.

ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳನ್ನು ಬೂತ್ ಮಟ್ಟದಲ್ಲಿ ಸಂಘಟಿತವಾಗಿ ಪುನರ್ರಚಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರುರವರ ನೇತೃತ್ವದಲ್ಲಿ ಗುರುವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ  ಸಭೆ ಕರೆದು ಚರ್ಚಿಸಲಾಯಿತು.

ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ,  ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಯತೀಶ್ ಕರ್ಕೇರಾ , ರಾಜೀವ್ ಗಾಂಧಿ ಪಂಚಾಯತ್‌ರಾಜ್ ಯೋಜನೆ ಜಿಲ್ಲಾ ಸಂಯೋಜಕಿ ರೋಷನಿ ಒಲೊವೇರಾ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ಕಿಸಾನ್ ಘಟಕ ಜಿಲ್ಲಾಧ್ಯಕ್ಷ ಶಶಿಧರ ಶೆಟ್ಟಿ ಎಲ್ಲೂರು, ಇಂಟೆಕ್ ಜಿಲ್ಲಾಧ್ಯಕ್ಷ ಗಣೇಶ್ ಕೋಟ್ಯಾನ್, ಕಾಂಗ್ರೆಸ್ ಸೇವಾದಳ ಜಿಲ್ಲಾ ಘಟಕದ ಆಸೀಪ್ ಎರ್ಮಾಳ್ ಹಾಗೂ ಮತ್ತಿತರ ಘಟಕಗಳ ಅಧ್ಯಕ್ಷರು, ಪದಾದಿಕಾರಿಗಳು, ಪುರಸಭಾ ಸದಸ್ಯರುಗಳು ಉಪಸ್ಥತರಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ  ಹರಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ಕ್ರಾಸ್ಟೋ ನಿರೂಪಿಸಿ,  ವಿಕಾಸ್ ಹೆಗ್ಡೆ ವಂದಿಸಿದರು.