ಕೋಲಾರ ಜಿಲ್ಲಾ ಅಸ್ಪತ್ರೆಗೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು : ಕೆ.ಶ್ರೀನಿವಾಸ ಗೌಡ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ: ಜಿಲ್ಲೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿ 3 ವರ್ಷ ಸೇವೆಸಲ್ಲಿಸಿ ಕೇಂದ್ರ ಕಚೇರಿಗೆ ವರ್ಗಾವಣೆಗೊಂಡ ಡಾ.ಎಚ್.ಕೆ.ಶಿವಕುಮಾರ್ ಅವರಿಗೆ ಬೀಳ್ಕೊಡುಗೆ ಹಾಗೂ ನೂತನ ಜಂಟಿನಿರ್ದೇಶಕರಾದ ಅವರಿಗೆ ಸಸಿ ನೀಡುವ ಮೂಲಕ ರೈತಸಂಘದಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಶಿವಕುಮಾರ್ ಅವರು ಜಿಲ್ಲೆಯಲ್ಲಿ ರೈತರ ಪರವಾಗಿ ಕಳೆದ 3 ವರ್ಷಗಳಿಂದ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅದೇ ರೀತಿಯಾಗಿ ನೂತನ ಜಂಟಿನಿರ್ದೇಶಕರು ಕೆಲಸ ಮಾಡಬೇಕೆಂದು ಮನವಿ ಮಾಡಿದರು.
ಬರದ ಕೋಲಾರ ಜಿಲ್ಲೆಯಲ್ಲಿನ ರೈತರ ಸಮಸ್ಯೆಗಳನ್ನು ಅರಿತಿದ್ದ ಶಿವಕುಮಾರ್ ಅವರು, ಸರ್ಕಾರದ ಮೇಲೆ ಒತ್ತಡ ಹಾಕಿ ಕೃಷಿಹೊಂಡ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದ್ದರು. ಇದೀಗ ಅವರು ವರ್ಗಾವಣೆಗೊಂಡಿರುವು ನೋವಿನ ಸಂಗತಿಯೇ ಆಗಿದ್ದರೂ ಸರ್ಕಾರದ ನಿಯಮಕ್ಕೆ ನಾವು ಬದ್ಧರಾಗಿದ್ದೇವೆ.
ಅವರಂತೆಯೇ ಹೊಸ ಜಂಟಿ ನಿರ್ದೇಶಕರು ಸಮಸ್ಯೆಗಳನ್ನು ಆಲಿಸಿ, ರೈತರಿಗೆ ಅಗತ್ಯ ಸೌಲಭ್ಯಗಳನ್ನು ಸಕಾಲಕ್ಕೆ ಒದಗಿಸಿಕೊಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ, ಈಕಂಬಳ್ಳಿ ಮಂಜುನಾಥ್, ಐತಾಂಡಹಳ್ಳಿ ಮಂಜುನಾಥ್, ವಿ.ನಳಿನಿ ಮತ್ತಿತರರು ಉಪಸ್ಥಿತರಿದ್ದರು.