ಜಿಲ್ಲಾಧಿಕಾರಿ ಸನ್ಮಾನ್ಯ ವಿದ್ಯಾ ಕುಮಾರಿ ಕೆ. ರವರು ನಂದಳಿಕೆ – ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ಗೆ ಕ್ರೀಡೋಪಕರಣ ಸಾಮಾಗ್ರಿಯನ್ನು ವಿತರಿಸಿದರು.

ವರದಿ:ವಾಲ್ಟರ್ ಮೊಂತೇರೊ

ಜಿಲ್ಲಾಧಿಕಾರಿ ಸನ್ಮಾನ್ಯ ವಿದ್ಯಾ ಕುಮಾರಿ ಕೆ. ರವರು ನಂದಳಿಕೆ – ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ಗೆ ಕ್ರೀಡೋಪಕರಣ ಸಾಮಾಗ್ರಿಯನ್ನು ವಿತರಿಸಿದರು.
ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ ಇವರ ಆಶ್ರಯದಲ್ಲಿ ಜರಗಿದ ಜಿಲ್ಲಾಮಟ್ಟದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಯುವಕ ಸಂಘಗಳಿಗೆ ನೀಡುವ ಕ್ರೀಡೋಪಕರಣ ಸಾಮಾಗ್ರಿಯನ್ನು ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸನ್ಮಾನ್ಯ ವಿದ್ಯಾ ಕುಮಾರಿ ಕೆ. ರವರು ನಂದಳಿಕೆ – ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ಗೆ ವಿತರಿಸಿದರು.
ಸಮಾರಂಭದಲ್ಲಿ ಉಡುಪಿ ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಡಾ. ರೊಶನ್ ಕುಮಾರ್ ಶೆಟ್ಟಿ, ಉಡುಪಿ ಎಮ್.ಜಿ.ಎಮ್. ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್, ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್, ಉಡುಪಿ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್, ಉಡುಪಿ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಧಿಕಾರಿ ವಿಲ್ಲ್‍ಫ್ರೆಢ್ ಡಿಸೋಜಾ, ನಂದಳಿಕೆ – ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.)ನ ಅಧ್ಯಕ್ಷರಾದ ನಂದಳಿಕೆ ರಾಜೇಶ್ ಎಸ್. ಕೋಟ್ಯಾನ್, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷರಾದ ಕಾಸ್ರಬೈಲು ಸುರೇಶ್ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತಿತರಿದ್ದರು.