ಪತ್ರಕರ್ತ ಸೈಯ್ಯದ್ ತಬ್ರೇಜ್  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ  

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಪತ್ರಕರ್ತ ಸೈಯ್ಯದ್ ತಬ್ರೇಜ್  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ  
ಕೋಲಾರ: ಪ್ರತಿ ವರ್ಷ ಪತ್ರಿಕೆ ದಿನಾಚರಣೆಯ ಅಂಗವಾಗಿ ಕೋಲಾರ  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಲವಾರು ವರ್ಷಗಳಿಂದ ಉರ್ದು ಡೈಲಿ ಸಾಲಾರ್ ಪತ್ರಿಕೆಯ ಹಿರಿಯ ವರದಿಗಾಗಿ ಕೆಲಸ ನಿರ್ವಹಿಸುತ್ತಿರುವ ಸೈಯದ್ ತಬ್ರೇಜ್ ಅವರನ್ನು ಗಣ್ಯರ ಹೆಸರಿನಲ್ಲಿ ನೀಡುವ ಪ್ರಶಸ್ತಿಗೆ ಇವರು ಆಯ್ಕೆಯಾಗಿದ್ದಾರೆ.
ಇನ್ನು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜುಲೈ 01 ರಂದು  ಕೋಲಾರ ಜಿಲ್ಲಾ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಅಧ್ಯಕ್ಷರಾದ ವಿ ಮುನಿರಾಜು ರವರ ಅಧ್ಯಕ್ಷತೆಯಲ್ಲಿ  ಪತ್ರಕರ್ತರ ಭವನದಲ್ಲಿ ನಡೆಯಲಿದ್ದು  ಕಾರ್ಯಕ್ರಮವನ್ನು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ನಾಗೇಶ್ ಅವರು ಉದ್ಘಾಟಿಸಿ ಲೋಕಸಭಾ ಸದಸ್ಯರಾದ ಎಸ್ ಮುನಿಸ್ವಾಮಿ ಅವರು ಪ್ರಶಸ್ತಿ ವಿಜೇತರಿಗೆ ಪುರಸ್ಕಾರ ನೀಡಲಿದ್ದಾರೆ.